BIG NEWS: ಲೋಕಸಭೆ ಚುನಾವಣೆಗೆ ತುಮಕೂರಿನಿಂದ ಸ್ಪರ್ಧೆಗೆ ರೆಡಿ: ಮಾಜಿ ಸಚಿವ ಸೋಮಣ್ಣ

ಬೆಂಗಳೂರು: ಲೋಕಸಭೆ ಚುನಾವಣೆಗೆ ತುಮಕೂರಿನಿಂದ ಸ್ಪರ್ಧಿಸಲು ವರಿಷ್ಠರು ಸೂಚನೆ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಗುರುವಾರ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಸೋಮಣ್ಣ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಸಭೆಗೆ ಅವಕಾಶ ಕೊಡುವಂತೆ ಕೇಳಿದ್ದೆ. ಈಗ ತುಮಕೂರಿನಿಂದ ಟಿಕೆಟ್ ಕೊಡುವ ಬಗ್ಗೆ ಒಂದು ಹಂತಕ್ಕೆ ಬಂದಿದೆ ಎನ್ನುವ ಮಾಹಿತಿ ಇದೆ. ಪಕ್ಷದ ವರಿಷ್ಠರು ಹೇಳಿದಂತೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಸತ್ಯ ಮಾತನಾಡುವ ಮತ್ತು ಕೆಲಸವೇ ದೇವರು ಎಂದು ನಂಬಿದವ ನಾನು. ಎಲ್ಲರೂ ಸೋಮಣ್ಣ ಆಗಲು ಸಾಧ್ಯವಿಲ್ಲ. ವರಿಷ್ಠರು ಹೇಳಿದರೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read