ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ.

ಅತ್ಯಾಚಾರ ಸಂತ್ರಸ್ತೆಯನ್ನು ರಾಮನಗರದ ರೆಸಾರ್ಟ್ ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಲಾಗಿದೆ.

ಅತ್ಯಾಚಾರ ಆರೋಪ, ಬ್ಲ್ಯಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದಾಗಿ ಆರೋಪ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read