ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. ಅಕ್ಕಮ್ಮ ಕುರಿ ಸಾಕಾಣಿಕೆ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿದ್ದರು. ಮದ್ಯವ್ಯಸನಿಯಾಗಿದ್ದ ಅವರ ಕಿರಿಯ ಪುತ್ರ ಸಿದ್ದಲಿಂಗಪ್ಪ(36) ಒಂದೊಂದೇ ಕುರಿಗಳನ್ನು ಮಾರಾಟ ಮಾಡಿ ಮದ್ಯ ಸೇವಿಸುತ್ತಿದ್ದ. ಕುರಿಗಳನ್ನು ಮಾರಿ ಕುಡಿಯಬೇಡ ಎಂದು ಅಕ್ಕಮ್ಮ ಬುದ್ಧಿವಾದ ಹೇಳಿದ್ದಕ್ಕೆ ತಲೆಗೆ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿ ಸಿದ್ಧಲಿಂಗಪ್ಪ ಪರಾರಿಯಾಗಿದ್ದಾನೆ. ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read