ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕು ಇರಿದು ಹತ್ಯೆ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಘಟನೆ ನಡೆದಿದೆ. ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದು ಚಾಕುವಿನಿಂದ ಇರಿಯಲಾಗಿದೆ. ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅಭಿನಂದನಾ ಸಮಾರಂಭದಲ್ಲಿ 28 ವರ್ಷದ ವರುಣ್  ನನ್ನು ಹತ್ಯೆ ಮಾಡಲಾಗಿದೆ. ಗಲಾಟೆ ವೇಳೆಯಲ್ಲಿ ಮಂಜು ಹಾಗೂ ಸಂಜು ಎಂಬುವರಿಗೆ ಗಾಯಗಳಾಗಿವೆ.

ಅಭಿಮಾನಿಗಳು ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಗಲಾಟೆ ನಡೆದು ವರುಣ್ ನನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಎಸ್.ಪಿ. ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read