BREAKING: ಮೈಸೂರು ದಸರಾ ಮಹೋತ್ಸವ: ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದ್ದು, ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮೇಳೈಸಿದೆ. ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್, ದಸರಾ ಉದ್ಘಾಟನೆ ನೆರವೇರಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲ-ಪುಷ್ಪ ಪ್ರದರ್ಶನ, ಆಹಾರ ಮೇಳ, ಕುಸ್ತಿ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಮೈಸೂರಿನ ಡಿ.ದೇವರಾಜ ಅರಸು ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ, ಅಂಬಾ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದರು. ಈ ವೇಳೆ ಕುಸ್ತಿಪಟುಗಳಿಗೆ ಬೆನ್ನುತಟ್ಟಿ ಹುರಿದುಂಬಿಸಿದರು.

ಬಳಿಕ ಪಂದ್ಯಾವಳಿ ನಡೆಯುವ ಸ್ಥಳದ ಪಕ್ಕದಲ್ಲಿಯೇ ಕುಳಿತು ಕುಸ್ತಿ ಪಂದ್ಯವನ್ನು ವೀಕ್ಷಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಶಾಸಕರಾದ ಡಿ.ರವಿಶಂಕರ್, ಶ್ರೀವತ್ಸ ಸಾಥ್ ನೀಡಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read