ದಸರಾ ಆನೆಗಳಿಗೆ ಇಂದಿನಿಂದ ಮೂಟೆ ಹೊರುವ ತಾಲೀಮು ಆರಂಭ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಜಪದೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪರೇಡ್ ಮಾಡುತ್ತಿವೆ.

ಇಂದಿನಿಂದ ದಸರಾ ಆನೆಗಳಿಗೆ ಮೂಟೆ ಹೊರುವ ತಾಲೀಮು ನೀಡಲಾಗುತ್ತಿದೆ. ಆನೆಗಳಿಗೆ ತಾಲೀಮು ನೀಡುವ ಮೊದಲು ಕೋಡಿ ಸೋಮೇಶ್ವರ ದೇವಸ್ಥಾನದ ಮುಂದೆ ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ನಮ್ದಾ, ತೊಟ್ಟಿಲು, ಹಗ್ಗ ಹಾಗೂ ಮರಳು ಮೂಟೆಗಳಿಗೆ ಪೂಜೆ ಸಲ್ಲಿಸಲಾಯಿತು.

ಡಿಸಿಎಫ್ ಡಾ.ಪ್ರಭುಗೌಡ ನೇತೃತ್ವದಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಲಕ್ಷ್ಮೀ, ವರಲಕ್ಷ್ಮೀ ಆನೆಗಳಿಗೂ ಇದೇ ವೇಳೆ ಪೂಜೆ ಸಲ್ಲಿಸಲಾಯಿತು. ಬಳಿಕ ಆನೆಗಳಿಗೆ ಮೂರು ಮರಳು ಮೂಟೆ ಹೊರಿಸುವ ತಾಲೀಮು ಆರಂಭವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read