BIG NEWS: ಅತ್ಯಾಚಾರ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಶಾಲೆಗೆ ಬಾಂಬ್ ಇಟ್ಟು ಸ್ಫೋಟ: ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಮೈಸೂರು: 2023ರಲ್ಲಿ ಹೈದರಾಬದ ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಖಾಸಗಿ ಶಾಲೆಗೆ ಬಾಅಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಅತ್ಯಾಚಾರ ಪ್ರಕರಣದ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಶಾಲೆಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ.

ಮೈಸೂರಿನ ಭುಗತಗಳ್ಲಿಯಲ್ಲಿರುವ ಜ್ಞಾನಸರೋವರ ಇಂಟರ್ ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅತ್ಯಾಚಾರ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಶಾಲೆಗೆ ಬಾಂಬ್ ಇಟ್ಟು ಮಕ್ಕಳಿಗೆ ಹಾನಿಯುಂಟುಮಾಡುವುದಾಗಿ ಹೇಳಲಾಗಿದೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶಾಲೆ ಆಡಳಿತ ಮಂಡಳಿ ಮೈಸೂರು ಎಸ್ ಪಿಗೆ ಲಿಖಿತ ದೂರು ನೀಡಿದೆ. ಸ್ಥಳಕ್ಕಾಗಮಿಸಿರುವ ಪೊಲೀಸರು, ಬಾಂಬ್ ಪತ್ತೆ, ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read