ತುಮಕೂರು : ರಾಜ್ಯದಲ್ಲಿ ಹುಲಿ, ಕೋತಿಗಳ ಹತ್ಯೆ ನಡೆದ ಘಟನೆ ಬೆನ್ನಲ್ಲೇ 19 ನವಿಲುಗಳು ನಿಗೂಢ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಎಫ್ ಎಸ್ ಎಲ್ ತನಿಖೆಯಿಂದ ಸಾವಿಗೆ ಕಾರಣ ತಿಳಿದು ಬರಲಿದೆ.
14 ಹೆಣ್ಣು ನವಿಲುಗಳು ಸೇರಿ 19 ನವಿಲುಗಳ ಮೃತದೇಹ ಪತ್ತೆ ಆಗಿದೆ. ಬೆಳಗ್ಗೆ ರೈತರು ಜಮೀನಿಗೆ ಹೋಗಿದ್ದಾಗ ನವಿಲಿನ ಮೃತದೇಹ ಪತ್ತೆಯಾಗಿದೆ. ಕ್ರಿಮಿನಾಶಕ ಸಿಂಪಡಿಸಿರುವ ಬೆಳೆಗಳನ್ನು ಸೇವಿಸಿ ನವಿಲು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.