ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಕುಲು, ಮನಾಲಿ ಪ್ರವಾಸಕ್ಕೆ ತೆರಳಿದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ.

ಶ್ರೀನಿಧಿ, ನವ್ಯಾ ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕಳೆದ ಗುರುವಾರ ಮೈಸೂರಿನಿಂದ ಕುಲು, ಮನಾಲಿಗೆ ಪ್ರವಾಸಕ್ಕೆ ತೆರಳಿದ್ದ ಅವರು ಭಾನುವಾರ ರಾತ್ರಿ ಕೊನೆಯ ಬಾರಿಗೆ ಸಂಪರ್ಕಕ್ಕೆ ಸಿಕ್ಕಿದ್ದರು. ಮಳೆ ಜಾಸ್ತಿ ಇದೆ. ರೆಡ್ ಅಲರ್ಟ್ ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದ್ದರು. ನಾವು ಸುರಕ್ಷಿತವಾಗಿದ್ದೇವೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಬಳಿಕ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಕುಟುಂಬದವರಲ್ಲಿ ಆತಂಕ ಮನೆ ಮಾಡಿದೆ. ನಮ್ಮವರನ್ನು ಸುರಕ್ಷಿತವಾಗಿ ಕರೆ ತರಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read