ಉಚಿತ ವಿದ್ಯುತ್ ‘ಗೃಹಜ್ಯೋತಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಭಾನುವಾರವೂ ಬೆಸ್ಕಾಂ, ನಾಡಕಚೇರಿ ತೆರೆಯಲು ಸರ್ಕಾರ ಸೂಚನೆ

ಬೆಂಗಳೂರು: ಇಂದಿನಿಂದ ಗೃಹಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರವೂ ನಾಡಕಚೇರಿ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ.

ಇಂದು ಬೆಸ್ಕಾಂ ಮತ್ತು ನಾಡಕಚೇರಿಗಳಲ್ಲಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದ್ದು, ರಜೆ ದಿನವಾದ ಇಂದು ಕರ್ತವ್ಯದ ದಿನವಾಗಿ ಪರಿಗಣಿಸಲು ತಿಳಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ನಾಡಕಚೇರಿಗಳು ಇಂದು ಕೂಡ ತೆರೆದು ಕಾರ್ಯನಿರ್ವಹಿಸಲಿವೆ. ಎಂಜಿ ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಆರಂಭಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read