BREAKING NEWS: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ತುರ್ತು ಅರ್ಜಿ ವಿಚಾರಣೆ ನಡೆಸುವಂತೆಯೂ ನ್ಯಾಯಾಲಯಕ್ಕೆ ನಳೀನ್ ಕಟೀಲ್ ಪರ ವಕೀಲರು ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ನಳೀನ್ ಕುಮಾರ್ ಕಟೀಲ್ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read