ಉತ್ತರ ಭಾರತದಲ್ಲಿ ಮುಂದುವರೆದ ʼನಂದಿನಿʼ ಹವಾ : ಹರಿಯಾಣದಲ್ಲೂ ಶೀಘ್ರವೇ ಹಾಲು ಲಭ್ಯ !

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಉತ್ತರ ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವ ಯೋಜನೆ ರೂಪಿಸಿದೆ. ಇದರ ಭಾಗವಾಗಿ ಹರಿಯಾಣ ರಾಜ್ಯದಲ್ಲಿ ಶೀಘ್ರವೇ ನಂದಿನಿ ಹಸು ಹಾಲು ಮಾರಾಟ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಕೆಎಂಎಫ್ ಗುರುವಾರ ಪ್ರಕಟಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳಲ್ಲಿ ಈಗಾಗಲೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆಎಂಎಫ್, ಇದೀಗ ಹರಿಯಾಣದಲ್ಲೂ ತನ್ನ ಛಾಪು ಮೂಡಿಸಲು ಸಜ್ಜಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕೆಎಂಎಫ್‌ನ ಉತ್ತರ ಭಾರತದ ಮುಖ್ಯಸ್ಥರಾದ ಅಮಿತ್ ಸಿಂಗ್, “ಶೀಘ್ರವೇ ಹರಿಯಾಣದ ಗ್ರಾಹಕರಿಗೆ ನಂದಿನಿ ಹಾಲು ಲಭ್ಯವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಭಾರತದಲ್ಲಿ ನಂದಿನಿ ಹಾಲಿನ ಉತ್ಪನ್ನಗಳಿಗೆ ಭಾರಿ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಿಸಲು ಮುಂದಾಗಿದೆ. ಹರಿಯಾಣದ ಗ್ರಾಹಕರು ಶೀಘ್ರವೇ ನಂದಿನಿ ಹಾಲಿನ ರುಚಿಯನ್ನು ಸವಿಯಲು ಸಾಧ್ಯವಾಗುತ್ತದೆ. ಈ ಮೂಲಕ ಕರ್ನಾಟಕದ ಗುಣಮಟ್ಟದ ಹಾಲನ್ನು ಉತ್ತರ ಭಾರತದ ಜನರಿಗೆ ತಲುಪಿಸುವ ಗುರಿಯನ್ನು ಕೆಎಂಎಫ್ ಹೊಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read