BREAKING NEWS: NCP ಮುಖ್ಯಸ್ಥ ಶರದ್ ಪವಾರ್ ಅಚ್ಚರಿ ನಿರ್ಧಾರ: ರಾಜೀನಾಮೆ ವಾಪಸ್ ಘೋಷಣೆ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಶರದ್ ಪವಾರ್ ಶುಕ್ರವಾರ ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

ನಾನು ನನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

ನಿಮ್ಮ ಭಾವನೆಗಳನ್ನು ನಾನು ಗೌರವಿಸದ ಇರಲಾರೆ. ನಿಮ್ಮ ಪ್ರೀತಿಯಿಂದಾಗಿ ನನ್ನ ರಾಜೀನಾಮೆಯನ್ನು ಹಿಂಪಡೆಯುತ್ತಿದ್ದೇನೆ. ರಾಜೀನಾಮೆ ವಾಪಸ್ ಪಡೆಯಲು ನನಗೆ ಬೇಡಿಕೆ ಇಡಲಾಗಿತ್ತು. ಎನ್‌ಸಿಪಿಯ ಹಿರಿಯ ನಾಯಕರು ಅಂಗೀಕರಿಸಿದ ನಿರ್ಣಯವನ್ನು ನಾನು ಗೌರವಿಸುತ್ತೇನೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರವನ್ನು ನಾನು ಹಿಂಪಡೆಯುತ್ತೇನೆ ಎಂದು ಶರದ್ ಪವಾರ್ ಘೋಷಿಸಿದ್ದಾರೆ,

ಮುಂದಿನ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ರಚಿಸಲಾದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಸಮಿತಿಯು ಶರದ್ ಪವಾರ್ ಅವರ ಪದತ್ಯಾಗದ ನಿರ್ಧಾರವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ. ಇದಾದ ನಂತರ ಶರದ್ ಪವಾರ್ ನಿರ್ಧಾರ ಬದಲಿಸಿ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವುದಾಗಿ ಘೋಷಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read