NDA ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ ಖ್ಯಾತ ನಟ ಚಿರಂಜೀವಿ

ಹೈದರಾಬಾದ್: ತೆಲುಗಿನ ಸ್ಟಾರ್ ನಟ ಹಾಗೂ ರಾಜಕಾರಣಿ ಚಿರಂಜೀವಿ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ.

ರಾಜ್ಯದಲ್ಲಿ ಪ್ರಬಲವಾಗಿರುವ ಕಾಪು ಸಮುದಾಯಕ್ಕೆ ಸೇರಿದ ಚಿರಂಜೀವಿ ಎನ್.ಡಿ.ಎ. ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿರುವುದು ದೊಡ್ಡ ಬಲ ಸಿಕ್ಕಂತಾಗಿದೆ. ಚಿರಂಜೀವಿ ಇನ್ನು ನಮ್ಮ ಪಕ್ಷದಲ್ಲೇ ಇದ್ದಾರೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ ಬೆನ್ನಲ್ಲೇ ಭಾನುವಾರ ಚಿರಂಜೀವಿ ಅವರಿಂದ ಎನ್.ಡಿ.ಎ. ಮೈತ್ರಿಕೂಟಕ್ಕೆ ಬೆಂಬಲದ ಘೋಷಣೆ ಹೊರಬಿದ್ದಿದೆ.

ರಾಜಕೀಯದಿಂದ ಅನೇಕ ವರ್ಷ ದೂರವಾಗಿದ್ದ ನಂತರ ಮತ್ತೆ ರಾಜ್ಯದಲ್ಲಿ ಜನಸೇನಾ, ಟಿಡಿಪಿ ಮತ್ತು ಬಿಜೆಪಿ ಮೈತ್ರಿ ಬಳಿಕ ನಾನು ರಾಜಕಾರಣದ ಬಗ್ಗೆ ಚರ್ಚಿಸುತ್ತಿದ್ದೇನೆ. ಆಂಧ್ರಪ್ರದೇಶದ ಅಭಿವೃದ್ಧಿಗೆ ಎನ್.ಡಿ.ಎ. ಅಭ್ಯರ್ಥಿಗಳಿಗೆ ಅದರಲ್ಲಿಯೂ ವಿಶೇಷವಾಗಿ ನನ್ನ ಆಪ್ತರಾದ ಬಿಜೆಪಿ ಅಭ್ಯರ್ಥಿ ಸಿ.ಎಂ. ರಮೇಶ್ ಮತ್ತು ಜನಸೇನಾ ಅಭ್ಯರ್ಥಿ ಪಿ. ರಮೇಶ್ ಬಾಬು ಅವರಿಗೆ ಮತ ಹಾಕಿ ಎಂದು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read