ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಗುಡ್ಡಕುಸಿತ ಸಂಭವಿಸುತ್ತಿದ್ದು, ಶೃಗೇರಿ ಬಳಿ ನೆಮ್ಮಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ.
ಭಾರಿ ಮಳೆಯಿಂದಾಗಿ ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಶೃಂಗೇರಿ-ಮಂಗಳೂರು ರಸ್ತೆ ಮಾರ್ಗ ಬಂದ್ ಆಗಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು, ಮರಗಳನ್ನು ತೆರವುಗೊಳಿಸಲು ಮಳೆ ಅಡ್ಡಿಯಾಗಿದೆ.
ಈ ಭಗದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ತೆರಳುವಂತೆ ವಾಹನ ಸವಾರರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಮಂಗಳೂರು ತೆರಳುವವರು ಬೇರೆ ಮಾರ್ಗದಲ್ಲಿ ತೆರಳುವಂತೆ ಸೂಚಿಸಲಾಗಿದೆ.
ಬಿದರಗೋಡು, ಆಗುಂಬೆ, ಉಡುಪಿ ಮಾರ್ಗವಾಗಿ ಸಂಚರಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶೃಂಗೇರಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.