ಮೈಸೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಚರಿಸುವುದಿಲ್ಲ. ಹೊಸ ಮುಖ್ಯಮಂತ್ರಿ ದಸರಾ ಆಚರಿಸಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸೆಪ್ಟೆಂಬರ್ ನಲ್ಲಿ ಕಾಂಗ್ರೆಸ್ ನಲ್ಲಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಮೈಸೂರಿನಲ್ಲಿ ಮಾತನಾಡಿದ ಆರ್. ಅಶೋಕ್, ಸಿಎಂ ಎಂಬ ಬದಲಾವಣೆ ನಿಶ್ಚಿತ. ಶಾಸಕರು, ಸಚಿವರು ಕೂಡ ಅದನ್ನೇ ಹೇಳುತ್ತಿದ್ದಾರೆ. ಅಧಿಕಾರ ಹಸ್ತಾಂತರ ಮೊದಲೇ ನಿಶ್ಚಯವಾಗಿದೆ. ಆದರೂ, ಸಿದ್ದರಾಮಯ್ಯ ಏನೂ ಆಗಿಲ್ಲ ಎನ್ನುವ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಅಧಿಕಾರದ ಕಿತ್ತಾಟ ತಾರಕಕ್ಕೇರಿದ್ದು, ಈ ಭ್ರಷ್ಟ ಸರ್ಕಾರ ಯಾವಾಗ ಕಿತ್ತು ಹೋಗುತ್ತದೆ ಎಂದು ಜನ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.