SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ.

ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ ಸ್ನೇಹಿತನೊಂದಿಗೆ ಕೇಕ್ ತರಲು ಹೋಗಿದ್ದ ವೇಳೆ ಸೈದುಲ್ಲಾ ಮತ್ತು ಬೇರೆ ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ಯುವಕರ ಗುಂಪು ಮಾರಕಾಸ್ತ್ರಗಳಿಂದ ಥಳಿಸಿ, ಚಾಕುವಿನಿಂದ ಇರಿದು ಸೈದುಲ್ಲನನ್ನು ಕೊಲೆ ಮಾಡಿದೆ ಎನ್ನಲಾಗಿದೆ.

ಸೈದುಲ್ಲಾ ಜೊತೆಗಿದ್ದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬ್ರೂಸ್ ಪೇಟೆ ತಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿ ರಾಜೇಶ್ ನನ್ನು ಬಂಧಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read