SHOCKING : ಬೆಂಗಳೂರಲ್ಲಿ ‘ವರಮಹಾಲಕ್ಷ್ಮಿ’ ಹಬ್ಬದಂದೇ ಅಪಘಾತಕ್ಕೆ ನವವಿವಾಹಿತೆ ಬಲಿ : ಪತ್ನಿ ಶವದ ಎದುರು ಬಿಕ್ಕಿ ಬಿಕ್ಕಿ ಅತ್ತ ಪತಿ.!

ಬೆಂಗಳೂರು :   ವರಮಹಾಲಕ್ಷ್ಮಿ ಹಬ್ಬದ ದಿನವೇ ತವರಿಗೆ ಹೋಗುತ್ತಿದ್ದ ನವವಿವಾಹಿತ ಮಹಿಳೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ಮೃತರನ್ನು 23 ವರ್ಷದ ಗೀತಾ ಎಂದು ಗುರುತಿಸಲಾಗಿದೆ. ಪತಿ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ  ಲಾರಿ ಡಿಕ್ಕಿಯಾಗಿದೆ . ತಲೆಗೆ ವಿಪರೀತ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾಳೆ.

ಅಮ್ಮನ ಮನೆಗೆ  ಪತಿ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಪತ್ನಿಯ ದೇಹವನ್ನು ತೊಡೆಮೇಲೆ ಇರಿಸಿಕೊಂಡು ಪತಿ ಸುನಿಲ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ಘಟನೆಯಿಂದ ನೆರೆದಿದ್ದ ಸ್ಥಳೀಯರು ಮಮ್ಮುಲ ಮರುಗಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read