BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ, ಓರ್ವ ಶಂಕಿತನ ವಶಕ್ಕೆ ಪಡೆದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಪಾತ್ರ ಇರುವ ಶಂಕೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಕಳೆದ ಶುಕ್ರವಾರ ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಪೊಲೀಸರು, ಎನ್ಐಎ ಅಧಿಕಾರಿಗಳು ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಬಳ್ಳಾರಿ ಮಾರ್ಗವಾಗಿ ಶಂಕಿತ ತೆರಳಿದ ಹಿನ್ನಲೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಓರ್ವ ಶಂಕಿತನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read