BIGG NEWS : ಜೂನ್ 22 ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿಲ್ಲ: ‘FKCCI’ ಅಧ್ಯಕ್ಷರ ಸ್ಪಷ್ಟನೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ (Karnataka Bandh) ಕರೆ ನೀಡಿದೆ ಎನ್ನಲಾಗಿತ್ತು, ಆದರೆ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು FKCCI ಅಧ್ಯಕ್ಷರ ಬಿ.ವಿ ಗೋಪಾಲರೆಡ್ಡಿ  ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಎಫ್ ಕೆ ಸಿಸಿ ಐ ಅಧ್ಯಕ್ಷ ಬಿ.ವಿ ಗೋಪಾಲರೆಡ್ಡಿ ‘ನಾವು ಬಂದ್ ಗೆ ಕರೆ ನೀಡಿಲ್ಲ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾವು ಈಗಾಗಲೇ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿಯಾಗಿ ವಿದ್ಯುತ್ ದರ ಇಳಿಕೆ ಬಗ್ಗೆ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ.9 ರಿಂದ ಶೇ.3ಕ್ಕೆ ಇಳಿಕೆಗೆ ಮನವಿ ಮಾಡಿದ್ದೇವೆ. . ಸರ್ಕಾರ ನಮ್ಮ ಜೊತೆ ಮಾತುಕತೆ ನಡೆಸಿದೆ. ಸರ್ಕಾರ ಏನು ಮಾಡುತ್ತದೆ ಕಾದು ನೋಡುತ್ತೇವೆ ಎಂದಿದ್ದಾರೆ.

ವಿದ್ಯುತ್ ದರ ಇಳಿಕೆ ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಜೂನ್ 10 ರವರೆಗೆ ಗುಡುವು ನೀಡಿತ್ತು, ದರ ಹಿಂಪಡೆಯದಿದ್ದರೆ ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು.ಹೀಗಾಗಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಒಂದು ದಿನದ ಮಟ್ಟಿಗೆ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು. , ಆದರೆ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು FKCCI ಅಧ್ಯಕ್ಷರು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಿರುವುದರಿಂದ ಎರಡು ತಿಂಗಳ ವಿದ್ಯುತ್ ಬಿಲ್ ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿದೆ.ಎಲ್ಲಾ ಬಗೆಯ ಗ್ರಾಹಕರಿಗೆ ವಿದ್ಯುತ್ ಬಿಲ್ ಭಾಗಶಃ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯುಚ್ಛಕ್ತಿ ಕಾಯ್ದೆ 2003 ರ 56 ನೇ ಸೆಕ್ಷನ್ ಅಡಿ ಭಾಗಶಃ ಬಿಲ್ ಪಾವತಿಸಬಹುದು ಎಂದು ಹೇಳಲಾಗಿದೆ.

ಮಾಸಿಕ ಬಿಲ್ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಲ್ ಬಂದಲ್ಲಿ ಗ್ರಾಹಕರಿಗೆ ಕಂತಿನಲ್ಲಿ ಬಿಲ್ ಪಾವತಿಸಲು ಅವಕಾಶವಿದ್ದು, ಕೈಗಾರಿಕೆ ಹೊರತುಪಡಿಸಿ ಬೇರೆ ಗ್ರಾಹಕರು ಇದನ್ನು ಬಳಸಿಕೊಂಡಿಲ್ಲ. ಎಲ್ಲ ಗೃಹಬಳಕೆ ಗ್ರಾಹಕರು ಕೂಡ ಲಿಖಿತ ಮನವಿ ಮಾಡಿಕೊಂಡಲ್ಲಿ ಭಾಗಶಃ ಬಿಲ್ ಪಾವತಿಗೆ ಅವಕಾಶ ಕಲ್ಪಿಸಲಾಗುತ್ತದೆ. ದುಪ್ಪಟ್ಟು ಬಿಲ್ ಬಂದಿರುವುದರಿಂದ ಗ್ರಾಹಕರು ಆಕ್ಷೇಪಣೆ ಸಲ್ಲಿಸಿ ಅರ್ಧದಷ್ಟು ಮೊತ್ತವನ್ನು ಮಾತ್ರ ಪಾವತಿಸಬಹುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read