ಬೆಂಗಳೂರು : ‘SSLC’ ಫಲಿತಾಂಶ ಕಡಿಮೆ ಬಂದ ರಾಜ್ಯದ ಶಾಲಾ ಶಿಕ್ಷಕರಿಗೆ ಬಡ್ತಿ ನೀಡದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಹೌದು. ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ತೀವ್ರ ಕಡಿಮೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಮುಂದಾಗಿದೆ.
2024-25ನೇ ಸಾಲಿನಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಸರ್ಕಾರಿ ಪ್ರೌಢಶಾಲೆ ಗಳಿಗೆ ನೋಟಿಸ್ ಜಾರಿಗೊಳಿಸಿ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತುಕ್ರಮಕ್ಕೆ ಸೂಚನೆ ನೀಡಿದೆ.ಫಲಿತಾಂಶ ಕುಸಿದಿರುವ ಅನುದಾನಿತ ಶಾಲೆಗಳಿಗೆ ಸರ್ಕಾರದ ವೇತನ. ಅನುದಾನ ತಡೆಹಿಡಿಯಲು, ವಿಷಯವಾರು ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಕಡಿತಕ್ಕೆ ಸೂಚಿಸಿದೆ.
ಸತತ 5 ವರ್ಷ ಶೇ.50ರಷ್ಟು ಮಕ್ಕಳು ಫೇಲಾಗಿದ್ರೆ ಸಂಪೂರ್ಣ ವೇತನಾನುದಾನ ಕಡಿತವಾಗಲಿದೆ. ಫಲಿತಾಂಶ ಕುಸಿದಿರುವ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ಬ್ರೇಕ್ ಹಾಕಲು ಸೂಚನೆ ನೀಡಲಾಗಿದೆ.ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ ಅವರು ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರುಗಳಿಗೆ (ಡಿಡಿಪಿಐ)ಗಳಿಗೆ ಆದೇಶ ನೀಡಿದ್ದಾರೆ. ಶೇ.60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಬೇಕು. ಅವರು ನೀಡುವ ಸಮಜಾಯಿಷಿ ಸಮರ್ಪಕವಾಗಿಲ್ಲದಿದ್ದರೆ ಶಿಸ್ತುಕ್ರಮಜರುಗಿಸಬೇಕು ಎಂದುಸೂಚಿಸಿದ್ದಾರೆ. ಈ ಹಿನ್ನೆಲೆ ಡಿಡಿಪಿಐಗಳು ಕಡಿಮೆ ಫಲಿತಾಂಶ ಬಂದಿರುವ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರುಗಳಿಗೆ ನೋಟಿಸ್ ನೀಡಿದ್ದಾರೆ.