ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ: ಶಾಸಕ ರಂಗನಾಥ್, ಮಾಜಿ ಸಂಸದ ಶಿವರಾಮೇಗೌಡಗೆ ನೋಟಿಸ್

ಬೆಂಗಳೂರು: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರಿಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ನೋಟಿಸ್ ನೀಡಲಾಗಿದೆ.

ಒಂದು ವಾರದೊಳಗೆ ನೋಟಿಸ್ ಗೆ ಉತ್ತರ ನೀಡುವಂತೆ ಶಿಸ್ತು ಪಾಲನಾ ಸಮಿತಿ ಮುಖ್ಯಸ್ಥ ರೆಹಮಾನ್ ಖಾನ್ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಲಾಗಿದೆ. ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ರೀತಿಯ ಗೊಂದಲ, ಪಕ್ಷಕ್ಕೆ ಮುಜುಗರ ತರುವ ಹೇಳಿಕೆಗಳನ್ನು ನೀಡದಂತೆ ಎಐಸಿಸಿ ಸೂಚನೆ ನೀಡಿದ್ದರೂ ಈ ರೀತಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಪಕ್ಷದ ಶಿಸ್ತು ಉಲ್ಲಂಘನೆಗೆ ಕಾರಣವಾಗುತ್ತದೆ. ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ನೋಟಿಸ್ ತಲುಪಿದ ಒಂದು ವಾರದೊಳಗೆ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಲು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read