ಬೆಳ್ತಂಗಡಿ : ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ದ. ಕನ್ನಡ ಜಿಲ್ಲೆ ಬೆಳ್ತಂಗಡಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸೈಯದ್ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಇದರಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಸೈಯದ್ ಮೇಲೆ ಹಲ್ಲೆ ನಡೆಸಿ ಆತನ ಮೊಬೈಲ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ನಲ್ಲಿ ಹಲವು ಅಶ್ಲೀಲ ವಿಡಿಯೋ ಪತ್ತೆಯಾಗಿದೆ.
ಕಾರ್ಕಳ ನಿವಾಸಿ ಸಯ್ಯದ್ (24) ಕಬ್ಬಡ್ಡಿ ಆಟಗಾರನಾಗಿದ್ದನು. ಈತ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿ ಸಿಕ್ಕಿಬಿದ್ದಿದ್ದಾನೆ. ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.
You Might Also Like
TAGGED:ಅಶ್ಲೀಲ ಮೆಸೇಜ್