BIG NEWS: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಸಾಧನೆ ತೋರಿದ ಒಡಿಶಾ ಕಾಂಗ್ರೆಸ್ ಸಮಿತಿ ವಿಸರ್ಜನೆ

ನವದೆಹಲಿ: ಈ ಬಾರಿಯ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ವಿಸರ್ಜಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಡಿಶಾ ಕಾಂಗ್ರೆಸ್ ಸಮಿತಿ ವಿಸರ್ಜಿಸಿದ್ದಾರೆ. ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ಜಿಲ್ಲಾ, ಬ್ಲಾಕ್, ಮಂಡಲ ಸಮಿತಿಗಳನ್ನು ವಿಸರ್ಜಿಸುವ ಪ್ರಸ್ತಾಪವನ್ನು ಭಾನುವಾರ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ಇದುವರೆಗೆ ಶರತ್ ಪಟ್ನಾಯಕ್ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಪೊಟ್ಟಂಗಿ ಕ್ಷೇತ್ರದ ಶಾಸಕ ರಾಮಚಂದ್ರ ಕದಂ ಅವರನ್ನು ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರನ್ನಾಗಿ, ಬಸುದೇವಪುರದ ಶಾಸಕ ಅಶೋಕ್ ದಾಸ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ, ರಾಜಂಗಪುರದ ಶಾಸಕ ಸಿ.ಎಸ್. ರಾಜೇನ್  ಎಕ್ಕಾ ಅವರನ್ನು ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read