BREAKING : ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ : ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಕಂಬಳ ಸಂಭ್ರಮ ಮನೆ ಮಾಡಿದ್ದು, ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೋಡು ಕೆರೆ ಉದ್ಘಾಟಿಸಿದ್ದಾರೆ.

ಇಂದು ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಗಂಗಾರತಿ ಮಾಡುವ ಮೂಲಕ ಕಂಬಳ ಕೆರೆಗೆ ಪೂಜೆ ನೆರವೇರಿಸಲಾಯಿತು.

ದೀಪ ಬೆಳಗುವ ಮೂಲಕ ಬೆಂಗಳೂರು ಕಂಬಳದ ಜೋಡು ಕರೆಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಉದ್ಘಾಟಿಸಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಶಾಸಕ ಎಸ್.ಆರ್.ವಿಶ್ವನಾಥ್, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಮತ್ತಿತರರು ಭಾಗಿಯಾಗಿದ್ದರು.

ಇಂದಿನಿಂದ 2 ದಿನ ಬೆಂಗಳೂರಿನಲ್ಲಿ ಕಂಬಳೋತ್ಸವ ನಡೆಯಲಿದೆ. 200 ಜೋಡಿ ಕೋಣಗಳು ಮಿಂಚಿನ ಓಟ ನಡೆಸಲಿದೆ. ಕಂಬಳ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read