BREAKING: ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಯುವಕ: ಮನನೊಂದು ಆತ್ಮಹತ್ಯೆ

ಧಾರವಾಡ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಗೇಮ್ ಗಳಿಗೆ ಯುವಕರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ಮಂಗಳಗಟ್ಟಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ್ ಆತ್ಮಹತ್ಯೆಗೆ ಶರಣಾದ ಯುವಕ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಹಣ ಕಲೆಕ್ಟ್ ಮಾಡುವ ಕೆಲಸ ಮಾಡುತ್ತಿದ್ದ ಯುವಕ ಬಸವರಾಜ್, ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ. ಫೈನಾನ್ಸ್ ಕಂಪನಿಗೆ ಕೊಡಬೇಕಿದ್ದ 3 ಲಕ್ಷ ಹಣವನ್ನು ಆನ್ ಲೈನ್ ಗೇಮ್ ಗೆ ಹಾಕಿದ್ದಾನೆ. ಫೈನಾನ್ಸ್ ಕಂಪನಿಗೆ ಹಣ ನೀಡಲಾಗದೇ ಮನನೊಂದಿದ್ದ ಯುವಕ ಈಗ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read