BREAKING: ಆನ್ ಲೈನ್ ರಮ್ಮಿಯಲ್ಲಿ ಹಣ ಕಳೆದುಕೊಂಡ ವ್ಯಕ್ತಿಯಿಂದ ದುಡುಕಿನ ನಿರ್ಧಾರ: ಮನೆಯವರನ್ನು ಊರಿಗೆ ಕಳಿಸಿ ಆತ್ಮಹತ್ಯೆ

ಆನ್ ಲೈನ್ ರಮ್ಮಿಯಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಡೆಪೇಟೆಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಾರಿ ಮಾಲೀಕ ಚಂದ್ರಶೇಖರ್(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮನೆಯಲ್ಲಿ ಪತ್ನಿಯ ಸೀರೆ ಬಳಸಿ ಫ್ಯಾನ್ ಗೆ ನೇಣು ಹಾಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ್ ಆನ್ಲೈನ್ ರಮ್ಮಿಯಲ್ಲಿ 5 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದರು. ಸ್ನೇಹಿತರ ಬಳಿಯೂ ಸಾಲ ಮಾಡಿದ್ದರು ಎನ್ನಲಾಗಿದೆ. ಮನೆಯವರನ್ನು ತುಮಕೂರಿನ ಸಂಬಂಧಿಕರ ಮದುವೆಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read