ದಾವಣಗೆರೆ: ಭದ್ರಾ ಬಲದಂಡೆ ನಾಲೆಯಿಂದ ನೀರು ಪೂರೈಕೆ ಯೋಜನೆಗೆ ವಿರೋಧ ವ್ಯಕ್ತವಾಗಿದೆ. ಇಂದು ದಾವಣಗೆರೆ ಜಿಲ್ಲೆಯ ರೈತರು ಭದ್ರಾ ಡ್ಯಾಂ ಬಳಿ ಪ್ರತಿಭಟನೆ ಕೈಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪ ಇರುವ ಭದ್ರಾ ಡ್ಯಾಂ ಬಳಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಭದ್ರಾ ಜಲಾಶಯ ಪ್ರದೇಶಕ್ಕೆ ಪ್ರತಿಭಟನೆ ನಡೆಸಲು ದಾವಣಗೆರೆ ಜಿಲ್ಲೆಯ ರೈತರು ತೆರಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಚಿಕ್ಕಮಗಳೂರು ತರೀಕೆರೆ ಸೇರಿದಂತೆ 1,600 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ ದಾವಣಗೆರೆ ಜಿಲ್ಲೆ ರೈತರಿಗೆ ತೊಂದರೆಯಾಗುತ್ತದೆ. ಈ ಜಲಾಶಯದ ನೀರನ್ನೇ ನಂಬಿ ದಾವಣಗೆರೆ ಜಿಲ್ಲೆ ರೈತರು ಭತ್ತ, ಅಡಕೆ ಬೆಳೆಯುತ್ತಿದ್ದಾರೆ. ಬಲದಂಡೆ ಕಾಲುವೆ ಸೀಳಲು ಬಿಡುವುದಿಲ್ಲ ಎಂದು ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ನೇತೃತ್ವದಲ್ಲಿ ಭದ್ರಾ ಜಲಾಶಯಕ್ಕೆ ರೈತರು ತೆರಳಿದ್ದಾರೆ. ನಿನ್ನೆ ಸಂಜೆಯಿಂದ ಜಲಾಶಯದ ಬಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ಕೈಗೊಂಡಿದ್ದಾರೆ.