ಹಳೆ ಪಿಂಚಣಿ ಯೋಜನೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೇಮಕಾತಿ ಆದೇಶದ ಮೇಲೆ ಒಪಿಎಸ್

ಬೆಂಗಳೂರು: ನೇಮಕಾತಿ ಆದೇಶದ ಮೇಲೆ ಹಳೆ ಪಿಂಚಣಿ ಯೋಜನೆ ಕಲ್ಪಿಸಲು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರ ನೀಡಿ, 2006ರಲ್ಲಿ ನೇಮಕಾತಿ ಆದೇಶ ಪಡೆದು ಕೆಲಸಕ್ಕೆ ವಿಳಂಬವಾಗಿ ಸೇರ್ಪಡೆಯಾದ ಸಿಬ್ಬಂದಿಗೆ ಹಳೆ ಪಿಂಚಣಿ ಯೋಜನೆ ಕಲ್ಪಿಸಲು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

2006 ರಲ್ಲಿ ನೇಮಕಾತಿ ಆದೇಶ ಪಡೆದ ನಂತರ ಅನೇಕರು ವಿಳಂಬವಾಗಿ ಕೆಲಸಕ್ಕೆ ಸೇರಿದ್ದು, ಅಂತಹ ಸಿಬ್ಬಂದಿಗೆ ಹಳೆ ಪಿಂಚಣಿ ಯೋಜನೆ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು. ಅನುದಾನಿತ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಸಹ ಸಿಬ್ಬಂದಿಗೆ ಸೌಲಭ್ಯ ನೀಡುವುದನ್ನು ಕಡ್ಡಾಯ ಮಾಡುವುದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read