ಭಾರತದ ನಡೆಯನ್ನೇ ಅನುಕರಿಸುತ್ತಾ ನಗೆಪಾಟಲಿಗೀಡಾಗುತ್ತಿರುವ ಪಾಕಿಸ್ತಾನ

ನವದೆಹಲಿ: ಭಾರತವು ಭಯೋತ್ಪಾದನೆಯನ್ನು ಮಟ್ಟಹಾಕಲು ಕೈಗೊಂಡಿರುವ ಜಾಗತಿಕ ಕಾರ್ಯತಂತ್ರಕ್ಕೆ ಪ್ರತಿತಂತ್ರವಾಗಿ ಪಾಕಿಸ್ತಾನವು ಇದೀಗ ತನ್ನದೇ ಆದ ರಾಜತಾಂತ್ರಿಕ ನಿಯೋಗವನ್ನು ವಿವಿಧ ದೇಶಗಳಿಗೆ ಕಳುಹಿಸಲು ಸಜ್ಜಾಗಿದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಾಗೂ ಭಾರತದ ‘ಸಿಂಧೂರ್ ಕಾರ್ಯಾಚರಣೆ’ಯ ಹಿನ್ನೆಲೆಯಲ್ಲಿ ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಸೇರಿದಂತೆ ಪ್ರಮುಖ ಪಾಲುದಾರ ದೇಶಗಳಿಗೆ ಸರ್ವಪಕ್ಷ ನಿಯೋಗವನ್ನು ಕಳುಹಿಸಲು ನಿರ್ಧರಿಸಿದ ಬೆನ್ನಲ್ಲೇ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಈ ನಿರ್ಧಾರ ಕೈಗೊಂಡಿದ್ದಾರೆ.

ಪಾಕಿಸ್ತಾನದ ಪ್ರಧಾನಮಂತ್ರಿ ಕಚೇರಿಯ ಪ್ರಕಾರ, ಪ್ರಧಾನಿ ಶೆಹಬಾಜ್ ಅವರು ಶನಿವಾರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ (ಪಿಪಿಪಿ) ಮುಖ್ಯಸ್ಥ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬಂದಿದ್ದಾರೆ.

ಭಾರತದ “ಪ್ರಚಾರ”ವನ್ನು ಜಗತ್ತಿನ ಮುಂದೆ ಬಯಲು ಮಾಡಲು ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗವನ್ನು ಪ್ರಮುಖ ವಿಶ್ವ ರಾಜಧಾನಿಗಳಿಗೆ ಕಳುಹಿಸಲು ಪ್ರಧಾನಿ ಶೆಹಬಾಜ್ ನಿರ್ಧರಿಸಿದ್ದಾರೆ ಎಂದು ಪಾಕಿಸ್ತಾನದ ಸರ್ಕಾರಿ ರೇಡಿಯೋ ವರದಿ ಮಾಡಿದೆ.

ಈ ನಿಯೋಗದ ನೇತೃತ್ವವನ್ನು ಬಿಲಾವಲ್ ಭುಟ್ಟೋ ಜರ್ದಾರಿ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ನಡೆಯನ್ನು ನೇರವಾಗಿ ಅನುಸರಿಸಿರುವ ಪಾಕಿಸ್ತಾನದ ಈ ನಡೆ, ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಪೈಪೋಟಿಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read