ಇಸ್ಲಾಮಾಬಾದ್: ಭಾರತದ ‘ಆಪರೇಷನ್ ಸಿಂದೂರ್’ ಪಾಕಿಸ್ತಾನದ ಮಿಲಿಟರಿ ವಲಯಗಳಲ್ಲಿ ಪ್ರತಿಧ್ವನಿಸಿದ್ದು, ಭಾರತೀಯ ಸಶಸ್ತ್ರ ಪಡೆಗಳ ಅಪ್ರತಿಮ ನಿಖರತೆ ಮತ್ತು ಕಾರ್ಯತಂತ್ರದ ಮಿಲಿಟರಿ ಕುಶಾಗ್ರಮತಿಯನ್ನು ಪ್ರದರ್ಶಿಸಿದೆ. ಈ ಕಾರ್ಯಾಚರಣೆ ಪಾಕಿಸ್ತಾನದ ನಾಯಕತ್ವವನ್ನು ಆಶ್ಚರ್ಯಚಕಿತಗೊಳಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ.
ಮೇ 9 ಮತ್ತು ಮೇ 10 ರ ಮಧ್ಯರಾತ್ರಿ ಸುಮಾರು 2:30 ರ ಸುಮಾರಿಗೆ, ಪಾಕಿಸ್ತಾನ ಪ್ರಧಾನಿ ಷರೀಫ್ ಅವರನ್ನು ಜನರಲ್ ಅಸಿಮ್ ಮುನೀರ್ ಎಚ್ಚರಗೊಳಿಸಿದ್ದು, ಪಾಕಿಸ್ತಾನದ ಪ್ರದೇಶದೊಳಗೆ ವ್ಯಾಪಕವಾದ ವಾಯುದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ.
9/10 ರ ರಾತ್ರಿ 2:30 ಕ್ಕೆ ನನಗೆ ಜನರಲ್ ಅಸಿಮ್ ಮುನೀರ್ ಕರೆ ಮಾಡಿ ಭಾರತವು ನೂರ್ ಖಾನ್ ವಾಯುನೆಲೆ ಸೇರಿದಂತೆ ನಮ್ಮ ಹಲವಾರು ವಾಯುನೆಲೆಗಳ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ತಿಳಿಸಿದರು ಎಂದು ಪಾಕಿಸ್ತಾನಿ ಪ್ರಧಾನಿ ಹೇಳಿದ್ದಾರೆ,
ಬಿಜೆಪಿ ರಾಷ್ಟ್ರೀಯ ಐಟಿ ವಿಭಾಗದ ಮುಖ್ಯಸ್ಥ ಮತ್ತು ಪಶ್ಚಿಮ ಬಂಗಾಳದ ಸಹ-ಉಸ್ತುವಾರಿ ಅಮಿತ್ ಮಾಳವೀಯ, ನೂರ್ ಖಾನ್ ವಾಯುನೆಲೆ ಮತ್ತು ಇತರ ಸ್ಥಳಗಳ ಮೇಲೆ ಬಾಂಬ್ ದಾಳಿ ನಡೆದಿರುವುದನ್ನು ಷರೀಫ್ ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಹೇಳುವ ಮೂಲಕ ಈ ಘಟನೆಯ ಗಂಭೀರತೆಯನ್ನು ಒತ್ತಿ ಹೇಳಿದ್ದಾರೆ. ‘ಆಪರೇಷನ್ ಸಿಂಧೂರ್’ ನ ಧೈರ್ಯ ಮತ್ತು ದಕ್ಷತೆಗೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.
Pakistan PM Shehbaz Sharif himself admits that General Asim Munir called him at 2:30am to inform him that India had bombed Nur Khan Air Base and several other locations. Let that sink in — the Prime Minister was woken up in the middle of the night with news of strikes deep inside… pic.twitter.com/b4QbsF7xJh
— Amit Malviya (@amitmalviya) May 16, 2025