BREAKING : ರಾಮಮಂದಿರ ಉದ್ಘಾಟನೆ ದಿನದಂದೇ ಪ್ಯಾನ್-ಇಂಡಿಯಾ ಸಿನಿಮಾ ಘೋಷಣೆ, ಪೋಸ್ಟರ್ ರಿಲೀಸ್

ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಪ್ರತಿಷ್ಠಾಪನಾ ಸಮಾರಂಭ ಇಂದು (ಜನವರಿ 22) ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಾಣ ಪ್ರತಿಷ್ಠಾಪನೆ ನೆರವೇರಿಸುತ್ತಿದ್ದಂತೆ ರಾಷ್ಟ್ರವು ಜೈ ಶ್ರೀ ರಾಮ್ ಘೋಷಣೆಗಳನ್ನು ಪ್ರತಿಧ್ವನಿಸಿತು. ಈ ಶುಭ ಸಂದರ್ಭದಲ್ಲಿ, ಶ್ರೀ ರಾಮ್, ಜೈ ಹನುಮಾನ್ ಎಂಬ ಹೊಸ ಚಿತ್ರದ ಘೋಷಣೆ ಮಾಡಲಾಗಿದೆ. ಕನ್ನಡ, ತಮಿಳು, ಹಿಂದಿ, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ಚಿತ್ರದ ಶೀರ್ಷಿಕೆ ಪೋಸ್ಟರ್ ಬಿಡುಗಡೆಯು ರಾಮ ಮಂದಿರದಲ್ಲಿ ಪ್ರತಿಷ್ಠಾಪನಾ ಸಮಾರಂಭದ ದಿನವೇ ನಡೆಯಿತು,. ಈ ಚಿತ್ರವನ್ನು ಅವಧೂತ್ ಎಂಬುವವರು ನಿರ್ದೇಶಿಸುತ್ತಿದ್ದು, ಇದು ಚಲನಚಿತ್ರ ನಿರ್ಮಾಣದಲ್ಲಿ ಅವರ ಚೊಚ್ಚಲ ಚಿತ್ರವಾಗಿದೆ. ಕೆ.ಎ.ಸುರೇಶ್ ಅವರ ‘ಸುರೇಶ್ ಆರ್ಟ್ಸ್ ಬ್ಯಾನರ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದ್ದು, ಎಲ್ಲಾ ಭಾಷೆಗಳ ಪ್ರಸಿದ್ಧ ನಟರು ಮತ್ತು ಕಲಾವಿದರು ತಾರಾಗಣವನ್ನು ಹೊಂದಿದ್ದಾರೆ. ಸಾಕಷ್ಟು ಬಜೆಟ್ ನೊಂದಿಗೆ, ಚಿತ್ರದ ಸ್ಟೋರಿಬೋರ್ಡಿಂಗ್ ಮತ್ತು ವಿಎಫ್ಎಕ್ಸ್ ಕೆಲಸಗಳು ಭರದಿಂದ ಸಾಗುತ್ತಿವೆ.

ಸದ್ಯ ಹರಿಬಿಟ್ಟಿರುವ ಪೋಸ್ಟರ್ ಬಹಳಷ್ಟು ಕುತೂಹಲ ಕೆರಳಿಸಿದೆ. ಬೆಟ್ಟ, ಗುಡ್ಡ, ಬೆಂಕಿ, ನೀರು, ರಾಮ – ಹನುಮ… ಹೀಗೆ ಅನೇಕ ಸಂಗತಿಗಳು ಪೋಸ್ಟರ್ ನಲ್ಲಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನ ಖ್ಯಾತ ನಟರು, ಕಲಾವಿದರು ಸೇರಿದಂತೆ ದೊಡ್ಡ ತಾರಾಬಳಗವೇ ಇರಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read