ಬೆಂಗಳೂರು: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಮುಂದುವರೆದಿದ್ದು ಯುದ್ಧದ ಭೀತಿ ಎದುರಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯುದ್ಧದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೋಸ್ಟಲ್ ಮಾತ್ರವಲ್ಲ ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದೆ. ಯಾವುದೇ ಕ್ಷಣದಲ್ಲಿ ಏನುಬೇಕಾದರೂ ಆಗಬಹುದು ಈ ಹಿನ್ನೆಲೆಯಲ್ಲಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ. ಈ ಸದರ್ಭದಲ್ಲಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ. ಯಾವಾಗ ಏನಾಗುತ್ತೋ ಗೊತ್ತಿಲ್ಲ. ಹಾಗಾಗಿ ಸಧ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಯಾವುದೇ ರಜೆ ಕೊಡಲ್ಲ ಎಂದು ತಿಳಿಸಿದರು.