ಮಂಗಳೂರು: ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ಚಾಲನೆ ನೀಡಿದಾರೆ.
ಸ್ಪೆಷಲ್ ಆಕ್ಷನ್ ಫೋರ್ಸ್ ಅಥವಾ ವಿಶೇಷ ಕಾರ್ಯಪಡೆಗೆ ಮಂಗಳೂರು ಪೊಲೀಸ್ ಕವಾಯಿತು ಮೈದಾನದಲ್ಲಿ ಗೃಹ ಸಚಿವ ಪರಮೇಶ್ವರ್ ಚಾಲನೆ ನೀಡಿದರು.
ರಾಜ್ಯ ಸರ್ಕಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ರಚನೆ ಮಾಡಿದೆ. ಇಂದಿನಿಂದ ಕಾರ್ಯಾರಂಭ ಮಾಡಲಿದೆ.
ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದೆ. 248 ಸಿಬ್ಬಂದಿ, ಮೂರು ಕಂಪನಿ ಕಾರ್ಯಾಚರಣೆ ನಡೆಸಲಿದೆ. ಪ್ರತಿ ಕಂಪನಿಯಲ್ಲಿ 80 ಸಿಬ್ಬಂದಿಗಳು ಇರಲಿದ್ದಾರೆ.