ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ನಂತರವೂ ವಿಶೇಷ ರೈಲು

ಬೆಂಗಳೂರು: ದೀಪಾವಳಿ ನಂತರದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿ- ಯಶವಂತಪುರ ನಡುವೆ ಎರಡೂ ಕಡೆಯಿಂದ ತಲಾ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ಮುಂದಾಗಿದೆ.

ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 3ರಂದು ರಾತ್ರಿ 8 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು,  ಮರುದಿನ ಮುಂಜಾನೆ 3.30ಕ್ಕೆ ಯಶವಂತಪುರ ತಲುಪಲಿದೆ.

ನವೆಂಬರ್ 4ರಂದು ಬೆಳಿಗ್ಗೆ 4:45ಕ್ಕೆ ಯಶವಂತಪುರದಿಂದ ಹೊರಟು ಅದೇ ದಿನ ಮಧ್ಯಾಹ್ನ 12.50ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ.

21 ಬೋಗಿಗಳಿರುವ ಈ ರೈಲು ಎರಡೂ ಕಡೆಗಳಿಂದ ಚಲಿಸುವಾಗ ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read