ಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರ ಪ್ರಚಾರ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಟ ಕಿಚ್ಚ ಸುದೀಪ್ ಬಳಿಕ ಮತ್ತೊಬ್ಬ ಸ್ಟಾರ್ ನಟ ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಪವನ್ ಕಲ್ಯಾಣ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸುವಂತೆ ಪವನ್ ಕಲ್ಯಾಣ್ ಗೆ ಮನವಿ ಮಾಡಲಾಗಿದೆ. ತೆಲುಗು ಪ್ರಾಬಲ್ಯದ ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು ಮೊದಲಾದ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ.

ಜನಸೇನಾ ಸಂಸ್ಥಾಪಕ ಅಧ್ಯಕ್ಷರಾಗಿರುವ ಪವನ್ ಕಲ್ಯಾಣ್ ಅವರಿಗೆ ರಾಜ್ಯದಲ್ಲಿ ಬಹುದೊಡ್ಡ ಅಭಿಮಾನಿ ಬಳಗ ಇದೆ. ಅವರು ಪ್ರಚಾರ ನಡೆಸುವುದರಿಂದ ಬಿಜೆಪಿಗೆ ಅನುಕೂಲವಾಗುವ ನೀರಿಕ್ಷೆ ಇದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read