ಬೆಂಗಳೂರು: ಪಂಚಾಯತ್ ಲೈಬ್ರರಿಯನ್ ರಾಮಚಂದ್ರಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಅವರನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರರಿಯನ್ ರಾಮಚಂದ್ರಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ತ್ಯಾಮಗೊಂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪಿಡಿಓ ಗೀತಾಮಣಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎಸ್, ಪಿಡಿಓ ಗೀತಾಮಣಿ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
