BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ ಸಾವನ್ನಪ್ಪಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸುಮಾರು 8 ನವಿಲುಗಳ ಮೃತದೇಹ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನವಿಲುಗಳ ಮೃತದೇಹ ಕೊಂಡೊಯ್ದಿದ್ದಾರೆ.

ಮೃತ ನವಿಲುಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ನವಿಲುಗಳಿಗೆ ವಿಷ ಹಾಕಿ ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಅಂಕಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read