ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಜನ ಸಾವು: ಪ್ರಧಾನಿ ಮೋದಿ ಸಂತಾಪ, ತಲಾ 2 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ತೆಲಂಗಾಣದ ಹೈದರಾಬಾದ್‌ನ ಐಕಾನಿಕ್ ಚಾರ್ಮಿನಾರ್ ಬಳಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಮಕ್ಕಳು ಸೇರಿದಂತೆ 17 ಜನ ಸಾವನ್ನಪ್ಪಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಮೃತರ ಪ್ರತಿ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

“ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ.

ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read