ನವದೆಹಲಿ: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.
“ಬೆಂಗಳೂರಿನಲ್ಲಿ ನಡೆದ ಅಪಘಾತವು ಸಂಪೂರ್ಣವಾಗಿ ಹೃದಯವಿದ್ರಾವಕವಾಗಿದೆ” ಎಂದು ಅವರು ಹೇಳಿದ್ದಾರೆ.
ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ 2025 ರ ವಿಜಯೋತ್ಸವವನ್ನು ಆಚರಿಸಲು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿದ್ದಾಗ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನ ಮಂತ್ರಿ @narendramodi
— PMO India (@PMOIndia) June 4, 2025