ಮಂಡ್ಯದಲ್ಲಿ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತೇನೆ: ಟಿಕೆಟ್ ಗಾಗಿ ಪ್ರಧಾನಿಗೆ ಸಂಸದೆ ಸುಮಲತಾ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ.

ಈ ಹಿನ್ನಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡದಂತೆ ಮನವಿ ಮಾಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡದೆ ಬಿಜೆಪಿಯೇ ಉಳಿಸಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಗೆ ಮಂಡ್ಯದಲ್ಲಿ ಮೊದಲ ಗೆಲುವು ತಂದುಕೊಡುತ್ತೇನೆ ಎಂದು ಪ್ರಧಾನಿ ಅವರನ್ನು ಭೇಟಿ ಉಮಾ ಮಾಡಿದ ಸಂಸದೆ ಸುಮಲತಾ ಅಂಬರೀಶ್ ಭರವಸೆ ನೀಡಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಅವರು ಯಾವುದೇ ಕಾರಣಕ್ಕೂ ಜೆಡಿಎಸ್ ಗೆ ಮಂಡ್ಯ ಬಿಟ್ಟು ಕೊಡಬೇಡಿ. ಭವಿಷ್ಯದಲ್ಲಿ ಬಿಜೆಪಿ ಕ್ಷೇತ್ರದಲ್ಲಿ ಭದ್ರವಾಗಿ ನೆಲೆಯೂರುವ ಆಶಯಕ್ಕೆ ಧಕ್ಕೆಯಾಗುತ್ತದೆ. ಮಂಡ್ಯ ಜನರ ವಿಶ್ವಾಸ ಗಳಿಸಲು ಬಿಜೆಪಿಗೆ ಅವಕಾಶ ಬಂದಿದ್ದು, ಅದನ್ನು ಕಳೆದುಕೊಳ್ಳುವುದು ಬೇಡ ಎಂದು ಪ್ರಧಾನಿಯವರೆಗೆ ಹೇಳಿದ್ದಾರೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read