BIG NEWS: ಎಷ್ಟು ದಿನ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯರಿಗೇ ಗೊತ್ತಿಲ್ಲ: ಮೋದಿ ವಾಗ್ದಾಳಿ

ಖಂಡ್ವಾ: ಎಷ್ಟು ದಿನ ಮುಖ್ಯಮಂತ್ರಿಗಾಗಿರುತ್ತೇನೆ ಎಂದು ಸಿದ್ದರಾಮಯ್ಯನವರಿಗೇ ಗೊತ್ತಿಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಪ್ರಧಾನಿ, ಕರ್ನಾಟಕ ರಾಜ್ಯದ ಲೂಟಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವೆ ಪೈಪೋಟಿ ನಡೆಯುತ್ತಿದೆ. ರಾಜ್ಯವನ್ನೇ ಹಾಳು ಮಾಡಿದ ಕಾಂಗ್ರೆಸ್ ನಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದು ಟೀಕಿಸಿದ್ದಾರೆ.

ಆರು ತಿಂಗಳ ಹಿಂದೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯ ಹಾಳು ಮಾಡಿದ್ದು, ಅಭಿವೃದ್ಧಿ ಕೆಲಸ ನಿಂತಿವೆ. ಮುಖ್ಯಮಂತ್ರಿಗೆ ತಾನು ರಾಜ್ಯವನ್ನು ಎಷ್ಟು ದಿನ ಮುನ್ನಡೆಸುತ್ತೇನೆ ಎನ್ನುವುದೇ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಕರ್ನಾಟಕವನ್ನು ಹಾಳು ಮಾಡಿದೆ. ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ಒಳ ಜಗಳ ಮುಂದುವರೆದಾಗ ದೆಹಲಿ ನ್ಯಾಯಾಧೀಶರು ಇತ್ಯರ್ಥಪಡಿಸುತ್ತಾರೆ. ಮುಂದುವರೆಸಿಕೊಂಡು ಹೋಗಲು ಸೂಚಿಸುತ್ತಾರೆ. ಇದೇ ಕರ್ನಾಟಕದ ಸಂಸ್ಕೃತಿಯಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read