ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶುಕ್ರವಾರ ನಡೆಯುವ ಲಕ್ಷ ಕಂಠ ಗೀತ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ ಸಾಗುವ ಆದಿ ಉಡುಪಿಯಿಂದ ಕೃಷ್ಣ ಮಠದವರೆಗಿನ ರಸ್ತೆ ಮತ್ತು ರೋಡ್ ಶೋ ನಡೆಸುವ ರಸ್ತೆಯಲ್ಲಿ ಗುರುವಾರ ರಿಹರ್ಸಲ್ ನಡೆಯಲಿದೆ.
ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ
ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಗಳು ದಿನಾಂಕ 28/11/2025 ರಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿರುವುದರಿಂದ ದಿನಾಂಕ 28/11/2025 ರ ಬೆಳಿಗ್ಗೆ 11:00 ಗಂಟೆಯಿಂದ ಕಾರ್ಯಕ್ರಮದ ಅಂತ್ಯದವರೆಗೆ ಸಂಚಾರ ಮಾರ್ಗ ಈ ಕೆಳಗಿನಂತೆ ಬದಲಾವಣೆ ಮಾಡಲಾಗಿದೆ.
1.ಸನ್ಮಾನ್ಯ ಪ್ರಧಾನ ಮಂತ್ರಿಗಳ ರೋಡ್ ಶೋ ಹಾಗೂ ಕಾರ್ಯಕ್ರಮದ ರಸ್ತೆಯಲ್ಲಿ ಸಂಚಾರ ನಿರ್ಭಂದಿಸಲಾಗಿದೆ.
2.ಮಂಗಳೂರಿನಿಂದ ಕುಂದಾಪುರದ ಕಡೆಗೆ ಚಲಿಸುವ ಲಘು ವಾಹನಗಳು ಉದ್ಯಾವರ – ಮಲ್ಪೆ – ಕೊಡವೂರು -ಆಶೀರ್ವಾದ್ ಜಂಕ್ಷನ್ ಮಾರ್ಗ ವಾಗಿ ಸಂಚರಿಸುವುದು
- ಕುಂದಾಪುರದಿಂದ ಮಂಗಳೂರಿನ ಕಡೆಗೆ ಚಲಿಸುವ ಲಘು ವಾಹನಗಳು ಅಂಬಾಗಿಲು – ಪೆರಂಪಳ್ಳಿ – ಮಣಿಪಾಲ-ರಾಂಪುರ – ಅಲೆವೂರು – ಕಟಪಾಡಿ ಮಾರ್ಗವಾಗಿ ಸಂಚರಿಸುವುದು.
- ಮಲ್ಪೆಯಿಂದ ಮಂಗಳೂರಿನ ಕಡೆಗೆ ಚಲಿಸುವ ಲಘು ವಾಹನಗಳು ಮಲ್ಪೆ – ಕಲ್ಮಾಡಿ – ಕಿದಿಯೂರು – ಕಡೆಕಾರ್ -ಉದ್ಯಾವರ – ಕಟಪಾಡಿ ಮಾರ್ಗವಾಗಿ ಸಂಚರಿಸುವುದು. ಅಥವಾ ಮಲ್ಪೆ – ಪಡುಕೆರೆ -ಮಟ್ಟು- ಕಾಪು ಮಾರ್ಗವಾಗಿ ಸಂಚರಿಸುವುದು.
- ಮಲ್ಪೆಯಿಂದ ಕುಂದಾಪುರದ ಕಡೆಗೆ ಚಲಿಸುವ ಲಘು ವಾಹನಗಳು ಮಲ್ಪೆ- ಕೊಡವೂರು – ಆಶೀರ್ವಾದ ಜಂಕ್ಷನ್–ರೋಬೊಸಾಫ್ಟ್. ಮಾರ್ಗವಾಗಿ ಅಥವಾ ನೇಜಾರು – ಸಂತೆಕಟ್ಟೆ ಮಾರ್ಗವಾಗಿ ಸಂಚರಿಸುವುದು.
- ಮಂಗಳೂರು ಕಡೆಯಿಂದ ಘನ ವಾಹನಗಳು ಕಟಪಾಡಿಯಿಂದ ಹಿಂದೆ ಸರ್ವೀಸ್ ರಸ್ತೆಯಲ್ಲಿ ನಿಲುಗಡೆ ಮಾಡುವುದು.
- ಕುಂದಾಪುರ ಕಡೆಯಿಂದ ಘನ ವಾಹನಗಳು ಸಂತೆಕಟ್ಟೆಯಿಂದ ಹಿಂದೆ ಸರ್ವೀಸ್ ರಸ್ತೆಯಲ್ಲಿ ನಿಲುಗಡೆ ಮಾಡುವುದು.
ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಸಂಚಾರ ಹಾಗೂ ಪಾರ್ಕಿಂಗ್ ಸಲಹೆಗಳು - ಕುಂದಾಪುರ ಕಡೆಯಿಂದ ರೋಡ್ ಶೋ ಗೆ ಆಗಮಿಸುವ ವಾಹನಗಳು ಅಂಬಾಗಿಲು ಮಾರ್ಗವಾಗಿ ನಿಟ್ಟೂರು ಬಳಿ ಜನರನ್ನು ಇಳಿಸಿ ಸಿಲಾಸ್ ಶಾಲಾ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು ಅಥವಾ ಜನರನ್ನು ರಸಿಕ ಬಾರ್ ಬಳಿ ಇಳಿಸಿ ಎಂ.ಜಿ.ಎಂ ಬಳಿ ಪಾರ್ಕಿಂಗ್ ಮಾಡುವುದು.
- ಕುಂದಾಪುರ ಕಡೆಯಿಂದ ಲಕ್ಷಕಂಠ ಗೀತೊತ್ಸವಕ್ಕೆ ಆಗಮಿಸುವ ವಾಹನಗಳು ಅಂಬಾಗಿಲು ದೊಡ್ಡನಗುಡ್ಡೆ ಮಾರ್ಗವಾಗಿ ಎಂ.ಜಿ.ಎಂ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಪೆರಂಪಳ್ಳಿ-
3.ಹೆಬ್ರಿ, ಹಿರಿಯಡಕ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳು ಮಣಿಪಾಲ ಮಾರ್ಗವಾಗಿ ಶಾರದಾ ಕಲ್ಯಾಣ ಮಂಟಪದ ಬಳಿ ಎಡಕ್ಕೆ ತಿರುಗಿ ಬೀಡನಗುಡ್ಡೆ ಸ್ಟೇಡಿಯಂನಲ್ಲಿ ಪಾರ್ಕಿಂಗ್ ಮಾಡುವುದು. - ಕಾರ್ಕಳ ಮೂಡುಬೆಳ್ಳೆ ಮಾರ್ಗವಾಗಿ ಲಕ್ಷಕಂಠ ಗೀತೊತ್ಸವಕ್ಕೆ ಆಗಮಿಸುವ ವಾಹನಗಳು ಅಲೆವೂರು – ಕುಕ್ಕಿಕಟ್ಟೆ ಮಾರ್ಗವಾಗಿ ಬೀಡನಗುಡ್ಡೆ ಪ್ರದರ್ಶನ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ಮಾಡುವುದು.
- ಕಾರ್ಕಳ ಕಡೆಯಿಂದ ರೋಡ್ ಶೋ ಗೆ ಆಗಮಿಸುವ ವಾಹನಗಳು ಮಣಿಪಾಲ ಮಾರ್ಗವಾಗಿ ಶಾರದಾ ಕಲ್ಯಾಣ ಮಂಟಪದ ಬಳಿ ಜನರನ್ನು ಇಳಸಿ ಬೀಡನಗುಡ್ಡೆ ಸ್ಟೇಡಿಯಂನಲ್ಲಿ ಪಾರ್ಕಿಂಗ್ ಮಾಡುವುದು.
- ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳು, ಕಟಪಾಡಿ ಬೈಲೂರು ಮುದ್ದಣ್ಣ ಎಸ್ಟೇಟ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಉದ್ಯಾವರ ಮಾರ್ಗವಾಗಿ-
- ಮಲ್ಪೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳು ಅಂಬಲಪಾಡಿ ಮಾರ್ಗವಾಗಿ ಶಾಮಿಲಿ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಗಳು ದಿನಾಂಕ 28/11/2025 ರಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿರುವುದರಿಂದ ದಿನಾಂಕ 28/11/2025 ರ ಬೆಳಿಗ್ಗೆ 11:00 ಗಂಟೆಯಿಂದ ಕಾರ್ಯಕ್ರಮದ ಅಂತ್ಯದವರೆಗೆ ಸಂಚಾರ ಮಾರ್ಗ ಈ ಕೆಳಗಿನಂತೆ ಬದಲಾವಣೆ ಮಾಡಲಾಗಿದೆ pic.twitter.com/lJx0OAHdFn
— SP Udupi (@PoliceUdupi) November 26, 2025
