BREAKING : ‘ಹುಲಿ ಉಗುರು’ ಬೆನ್ನಲ್ಲೇ ಮಾಂಸಕ್ಕಾಗಿ ನವಿಲುಗಳ ಬೇಟೆ : ತುಮಕೂರಿನಲ್ಲಿ ಮೂವರು ಅರೆಸ್ಟ್

ಬೆಂಗಳೂರು : ‘ಹುಲಿ ಉಗುರು’ ಪ್ರಕರಣ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಂಸಕ್ಕಾಗಿ ನವಿಲುಗಳ ಬೇಟೆಯಾಡುತ್ತಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಹೌದು, ತುಮಕೂರಿನ ಮಾರನಾಯಕನಪಾಳ್ಯದಲ್ಲಿ ರಾಷ್ಟ್ರಪಕ್ಷಿ ನವಿಲು ಬೇಟೆಯಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಎಂದು ಗುರುತಿಸಲಾಗಿದೆ.
ಇವರೆಲ್ಲವೂ ಒರಿಸ್ಸಾ ಮೂಲದವರಾಗಿದ್ದು, ಮಾರನಾಯಕನಪಾಳ್ಯದಲ್ಲಿ ಕೂಲಿ ಕೆಲಸಕ್ಕೆಂದು ಬಂದಿದ್ದರು. ನವಿಲುಗಳ ಮಾಂಸ ರುಚಿ ಹಾಗೂ ಗಟ್ಟಿ ಇರುತ್ತದೆ ಎಂದು ನವಿಲುಗಳನ್ನು ಬೇಟೆಯಾಡುತ್ತಿದ್ದರು.

ಸದ್ಯ ಮೂವರನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು 1.5 ಕೆಜಿ ಮಾಂಸ ಹಾಗೂ ಬೇಟೆಗೆ ಬಳಸುತ್ತಿದ್ದ ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಬಂಧಿತರ ವಿರುದ್ಧ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read