ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ವಿವಾಹಿತೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹರತಾದಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿ. ಮಹಿಳೆಯ ನೆರೆಮನೆ ನಿವಾಸಿಯಾಗಿರುವ ರಾಘವೇಂದ್ರ ಡಿಸೆಂಬರ್ 27ರಂದು ಕೆಲಸಕ್ಕೆ ಕಾಡಿನ ಮಾರ್ಗವಾಗಿ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಕೋಳಿ ಮಾಡಿ ಜೀವನ ಸಾಗಿಸುತ್ತಿದ್ದು, ಕಾಡಿನ ಮಾರ್ಗವಾಗಿ ಕೆಲಸಕ್ಕೆ ತೆರಳುತ್ತಿದ್ದರು. ಹೊಂಚು ಹಾಕಿ ಕುಳಿತಿದ್ದ ಆರೋಪಿ ಆಕೆಯ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read