ಜಗಳ ಬಿಡಿಸಲು ಬಂದ ಪೊಲೀಸ್ ವಾಹನವನ್ನೇ ಕದ್ದೊಯ್ದ ಭೂಪ: ಕಕ್ಕಾಬಿಕ್ಕಿಯಾದ ಪೊಲೀಸರು

ತುಮಕೂರು: ಜಗಳ ಬಿಡಿಸಲು ಬಂದ ಪೊಲೀಸ್ ವಾಹನವನ್ನು ವ್ಯಕ್ತಿಯೊಬ್ಬ ಕದ್ದುಕೊಂಡು ಹೋಗಿದ್ದಾನೆ. ಇದರಿಂದಾಗಿ ಪೊಲೀಸರು ಹೈರಾಣಾಗಿದ್ದಾರೆ. ಸೋಮವಾರ ತಡರಾತ್ರಿ ಗುಬ್ಬಿ ತಾಲೂಕು ಸಿ.ಎಸ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾರನಹಳ್ಳಿಯಲ್ಲಿ ಘಟನೆ ನಡೆದಿದೆ.

ಮುನಿಯ ಮತ್ತು ಆತನ ಸಹೋದರನ ನಡುವೆ ಜಗಳ ನದಿದೆ. ಜಗಳದ ವೇಳೆ ಮುನಿಯನ ಸಹೋದರ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಜಗಳ ಬಿಡಿಸಿ ಮುನಿಯನಿಗೆ ತಿಳಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಮುನಿಯ ಪೊಲೀಸರು ಸ್ಥಳಕ್ಕೆ ಬಂದಿದ್ದ 112 ಪೊಲೀಸ್ ವಾಹನದ ಹಿಂಬದಿಯ ಗಾಜು ಒಡೆದು ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.

ಘಟನೆಯಿಂದ ಕಕ್ಕಾಬಿಕ್ಕಿಯಾದ ಪೊಲೀಸರು ಇಡೀ ರಾತ್ರಿ ಮುನಿಯ ಹಾಗೂ 112 ಪೊಲೀಸ್ ವಾಹನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ತಮುಕೂರು ತಾಲೂಕಿನ ಹೆಬ್ಬೂರು ಗ್ರಾಮದ ಬಳಿ ವಾಹನ ಸಮೇತ ಮುನಿಯ ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read