ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ: ಮುನಿರತ್ನ ಬಂಧನಕ್ಕೆ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ತರಾತುರಿಯಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಿದ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮುನಿರತ್ನ ಮಾತನಾಡಿದ್ದಾರೆ ಎನ್ನಲಾಗುವ ಪದ ಬಳಕೆ ಸರಿ ಎಂದು ಹೇಳುವುದಿಲ್ಲ. ಮುನಿರತ್ನ ಆ ರೀತಿ ಮಾತನಾಡಿದ್ದರೆ ಯಾವ ಕಾಲಕ್ಕೂ ಸರಿ ಎನ್ನುವುದಿಲ್ಲ. ನಿನ್ನೆಯಷ್ಟೇ ಮುನಿರತ್ನ ಅವರದು ಎನ್ನಲಾದ ಆಡಿಯೋ ಹೊರಗೆ ಬಂದಿದೆ. ಇಂದು ತರಾತುರಿಯಲ್ಲಿ ಅವರನ್ನು ಬಂಧಿಸಲಾಗಿದೆ. ಆಡಿಯೋ ಫೋರೆನ್ಸಿಕ್ ಟೆಸ್ಟ್ ಆಗಬೇಕು ಎಂದು ಹೇಳಿದ್ದಾರೆ.

ಆಡಿಯೋ ನಿನ್ನೆ ಹೊರಗೆ ಬಂದಿದೆ. ಈಗ ಅರೆಸ್ಟ್ ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಗರಣ ನಡೆದಿದೆ. ಆದರೂ ಇಡಿ ಎಂಟ್ರಿ ಆಗುವವರೆಗೆ ಸರ್ಕಾರ ಯಾರನ್ನು ಅರೆಸ್ಟ್ ಮಾಡಿರಲಿಲ್ಲ. ಇದೀಗ ಮುನಿರತ್ನ ಬಂಧನ ಮೂಲಕ ಕಾಂಗ್ರೆಸ್ ದ್ವೇಷದ ರಾಜಕಾರಣ ಎಂದು ಜೋಶಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read