ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಗಳನ್ನು ಅಂಟಿಸಿ ಅಭಿಯಾನ ನಡೆಸಿದ್ದವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಪೋಸ್ಟರ್ ಗಳನ್ನು ಬೆಂಗಳೂರಿನ ವಿವಿಧೆಡೆ ಅಂಟಿಸುವ ಮೂಲಕ ಪೋಸ್ಟರ್ ಅಭಿಯಾನ ನಡೆಸಿತ್ತು. ಬೆಂಗಳೂರಿನ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್.ಸರ್ಕಲ್ ಸೇರಿದಂತೆ ವಿವಿಧೆಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕಿಡಿಕಾರಿದ್ದರು.
ಅನುಮತಿಯಿಲ್ಲದೇ ಪೋಸ್ಟರ್ ಗಳನ್ನು ಅಂಟಿಸಿದ್ದಕ್ಕಾಗಿ ಹಲಸೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.