ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ: ಜೂ. 6 ರ ನಂತರ ಚುನಾವಣಾ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದಲ್ಲಿರುವ ಸಹಕಾರ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ.

ರಾಜ್ಯದಲ್ಲಿ ಇನ್ನೊಂದು ತಿಂಗಳಲ್ಲಿ ಅವಧಿ ಪೂರ್ಣಗೊಳ್ಳುವ ಹಾಲು ಒಕ್ಕೂಟಗಳು, ಡಿಸಿಸಿ ಬ್ಯಾಂಕುಗಳು, ಸೇರಿದಂತೆ ವಿವಿಧ ಸಹಕಾರ ಸಂಘಗಳ ಚುನಾವಣೆಗೆ ಸಹಕಾರ ಇಲಾಖೆ ದಿನಾಂಕ ನಿಗದಿಪಡಿಸಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕುಗಳು ಮತದಾರರ ಪಟ್ಟಿ ರಚಿಸಿ ಪ್ರಕ್ರಿಯೆ ಕೈಗೊಂಡಿದ್ದು, ಇದೇ ವೇಳೆ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದ್ದರಿಂದ ಸಹಕಾರ ಸಂಘಗಳು, ಹಾಲು ಒಕ್ಕೂಟಗಳು ಮತ್ತು ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿಗಳ ಚುನಾವಣೆಯನ್ನು ಯಥಾಸ್ಥಿತಿಯಲ್ಲಿ ಸ್ಥಗಿತಗೊಳಿಸಬೇಕು. ಜೂನ್ 6 ರ ನಂತರ ಚುನಾವಣಾ ಪ್ರಕ್ರಿಯೆ ಮುಂದುವರಿಸುವಂತೆ ಆದೇಶಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read