ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಆಯ್ಕೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಹಾಸನ ಕ್ಷೇತ್ರದಿಂದ ಚುನಾಯಿತರಾಗಿರುವ ಶ್ರೇಯಸ್ ಪಟೇಲ್ ಅವರ ಆಯ್ಕೆಯ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ಸಲ್ಲಿಸಲಾಗಿದೆ.

ಶ್ರೇಯಸ್ ಪಟೇಲ್ ಆಯ್ಕೆಯ ಅಸಿಂಧು ಕೋರಿ ವಕೀಲ ಜಿ. ದೇವರಾಜೇಗೌಡ ಪುತ್ರ ಡಿ. ಚರಣ್ ಗೌಡ ಅರ್ಜಿ ಸಲ್ಲಿಸಿದ್ದಾರೆ. ಶ್ರೇಯಸ್ ಪಟೇಲ್ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿಗಳನ್ನು ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. 5 ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ ಎಂದು ತಕರಾರು ಎತ್ತಲಾಗಿದೆ.

ಡಾ. ಪ್ರಭಾ ಮಲ್ಲಿಕಾರ್ಜುನ ಆಯ್ಕೆ ಅಸಿಂಧು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ ಅರ್ಜಿ ಸಲ್ಲಿಸಿದ್ದಾರೆ. ಮತದಾರರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ವಿತರಿಸುವ ಮೂಲಕ ವರ್ಷಕ್ಕೆ 1 ಲಕ್ಷ ರೂ. ಕೊಡುವ ಭರವಸೆ ನೀಡಿದ್ದಾರೆ. ಇದು ಪ್ರಚಾರ ಪ್ರತಿನಿಧಿ ಕಾಯ್ದೆಯ ವಿರುದ್ಧವಾಗಿದೆ. ಅವರ ಆಯ್ಕೆಯನ್ನು ಅಸಿಂಧುವೆಂದು ಘೋಷಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಗುರುವಾರ ಈ ಅರ್ಜಿಗಳು ಸಲ್ಲಿಕೆಯಾಗಿದ್ದು, ದಸ್ತಾವೇಜು ಕಚೇರಿಯಲ್ಲಿ ಪರಿಶೀಲನೆಗೆ ಒಳಗಾದ ಬಳಿಕ ವಿಚಾರಣೆಗೆ ನಿಗದಿಯಾಗಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read